ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ತೇರು ಬಿದ್ದು ಆರನೇ ತರಗತಿಯ ವಿದ್ಯಾರ್ಥಿನಿ ಜ್ಯೋತಿ ಸಾವನ್ನಪ್ಪಿದ್ದಾಳೆ. ನನ್ನ ಮಗಳ ಮೇಲೆ ತೇರು ಬಿದ್ದು ಮೃತಪಟ್ಟಿದ್ದಾಳೆ. ಇಲ್ಲಿಯವರೆಗೂ ಯಾರು ಬಂದು ನಮ್ಮ ಸಮಸ್ಯೆ ಕೇಳಿಲ್ಲ. ತಾಲ್ಲೂಕು ಆಡಳಿತದವರು ಯಾರು ಕೂಡ ಬಂದಿಲ್ಲ. ನಮ್ಮ ಕಷ್ಟ ಕೇಳುವವರು ಯಾರು ಇಲ್ಲ ಎಂದು ಮೃತಳ ತಾಯಿ ಹೇಳಿದ್ದಾರೆ.