ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಶಾಲೆಯಲ್ಲಿ ಈ ದುಸ್ಸಾಹಸ ನಡೆದಿದೆ. ಮಲೆನಾಡಿನ ವಿದ್ಯಾರ್ಥಿಗಳ ಪುಂಡಾಟದ ಅಟ್ಟಹಾಸಕ್ಕೆ ಶಿಕ್ಷಕರು ಹಾಗು ಪೋಷಕರು ಬೆಚ್ಚಿ ಬಿದ್ದಿದ್ದಾರೆ. ಹೆದ್ದಾರಿಪುರ ಸರಕಾರಿ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಕರು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಆದರೆ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭಕ್ಕೆ ಮುನ್ನ ಕೆಲವು ಕಿಡಿಗೇಡಿ ವಿದ್ಯಾರ್ಥಿಗಳ ದಾಂಧಲೆಯಿಂದ ತರಗತಿಯಲ್ಲಿನ ಕುರ್ಚಿ, ಟೇಬಲ್, ಟ್ಯೂಬ್ ಲೈಟ್, ಫ್ಯಾನ್, ಕಿಟಕಿ, ಮೇಲ್ಛಾವಣಿಯ ಹೆಂಚು, ಕೊಠಡಿ ಬಾಗಿಲು ಕ್ಷಣ ಮಾತ್ರದಲ್ಲಿ ಪೀಸ್ ಪೀಸ್ ಆಗಿದೆ.