ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗಾಗಿ ಹಣದ ಹೊಳೆ ಹರಿಯುತ್ತಿದೆ. ಈ ಹಿಂದೆ ಮುಸ್ಲಿಂ ಮತಗಳ ಒಲೈಕೆಗೆ ಕವ್ವಾಲಿ ಮಾಡಿಸಿದ್ದ ಸಚಿವ ಎಂಟಿಬಿ ನಾಗರಾಜ್, ಇದೀಗ ಶಿವರಾತ್ರಿಗೆ 60 ಅಡಿ ಎತ್ತರದ ಶಿವ ಲಿಂಗ ಪ್ರತಿಷ್ಠಾಪಿಸಿ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ಜೊತೆಗೆ ಹೋದಕಡೆಯಲೆಲ್ಲ ಸೀರೆ, ಬೆಡ್ಶಿಟ್ಗಳನ್ನು ಹಂಚುತ್ತಿದ್ದಾರೆ.