ಗಾಲಿ ಸೋಮಶೇಖರ ರೆಡ್ಡಿ, ಬಿಜೆಪಿ ಶಾಸಕ

ಜನಾರ್ಧನ ರೆಡ್ಡಿ ಅವರೊಂದಿಗೆ ವೈಯಕ್ತಿಕವಾಗಿ ಯಾವುದೇ ತಗಾದೆ ಇರಲಿಲ್ಲ ಆದರೆ, ಅವರು ಹೊಸ ಪಕ್ಷ ಕಟ್ಟಿದ್ದರಿಂದ ವೈಮನಸ್ಸು ಮೂಡಿತ್ತು ಎಂದು ಸೋಮಶೇಖರ ರೆಡ್ಡಿ ಹೇಳಿದರು. ಅವರು ಪಕ್ಷಕಟ್ಟಿ ಅಸೆಂಬ್ಲಿ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರಿಂದಲೇ ಬಿಜೆಪಿ ಸಾಕಷ್ಟು ಹಿನ್ನಡೆ ಉಂಟಾಯಿತು ಎಂಬ ಅಂಶವನ್ನು ಸೋಮಶೇಖರ್ ರೆಡ್ಡಿ ತಳ್ಳಿಹಾಕಿದರು.