ಕಳೆದ 15 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನದಿ ತುಂಬಿ ಹರಿಯುತ್ತಿರುವುದರಿಂದ ಒಂದಡೆ ಕಾವೇರಿ ತೀರದ ರೈತರಲ್ಲಿ ಸಂತಸ ಮೂಡಿದೆ. ಮತ್ತೊಂದಡೆ ಕಾವೇರಿ ನದಿ ಪ್ರವಾಹದಿಂದ ಕೊಡಗು ಜಿಲ್ಲೆಯಲ್ಲಿನ ರಸ್ತೆಗಳು ಜಲಾವೃತಗೊಂಡಿವೆ. ಜನಜೀವನ ಅಸ್ಯವ್ಯಸ್ತವಾಗಿದೆ.