ನೇಹಾ ಕೊಲೆ ನಡೆದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರದ ಹಲವಾರು ಪ್ರತಿನಿಧಿಗಳು ನಿರಂಜನ್ ಮನೆಗೆ ಭೇಟಿ ಮಗಳ ಸಾವಿಗೆ ನ್ಯಾಯ ಒದಗಿಸುವ ಭರವಸೆ ನೀಡಿದ್ದರು. ಆ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಅಂತ ಗೃಹ ಸಚಿವರಿಗೂ ಗೊತ್ತಿರಲಿಕ್ಕಿಲ್ಲ. ತ್ವರಿತ ವಿಚಾರಣೆಗಾಗಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚಿಸುವುದಾಗಿ ಸರ್ಕಾರ ಹೇಳಿತ್ತು. ಹತ್ಯೆ ನಡೆದು ಒಂದು ತಿಂಗಳಾಗುತ್ತಾ ಬಂದರೂ ಕೋರ್ಟ್ ರಚನೆ ಬಗ್ಗೆ ಸರ್ಕಾರದಿಂದ ಸುಳಿವಿಲ್ಲ.