ಸಚಿವರ ಎದುರಲ್ಲೇ ಚಾಮರಾಜನಗರದ ಇಬ್ಬರು ಶಾಸಕರ ಜಗಳ

ಸಚಿವರು ಹಾಗೂ ಅಧಿಕಾರಿಗಳ ಎದುರೇ ಇಬ್ಬರು ಕಾಂಗ್ರೆಸ್ ಶಾಸಕರ ನಡುವೆ ಮಾತಿನ ಮಲ್ಲಯುದ್ಧ ನಡೆದಿದೆ. ಚಾಮರಾಜನಗರ ಜಿಲ್ಲೆಯ ಇಬ್ಬರು ಪ್ರಬಲ ಸಚಿವ ಆಕಾಂಕ್ಷಿಗಳ ನಡುವೆ ವಾಗ್ದಾಳಿ ನಡೆದಿದೆ. ಕೆಡಿಪಿ ಸಭೆಯಲ್ಲಿ ಶಾಸಕ ಪುಟ್ಟರಂಗಶೆಟ್ಟಿ ಹಾಗೂ ಶಾಸಕ ಎ.ಆರ್ ಕೃಷ್ಣಮೂರ್ತಿ ನಡುವೆ ಮಾತಿನ ಸಮರ ನಡೆದಿದೆ.