ಬೃಹತ್ ಅಪಾರ್ಟ್ಮೆಂಟ್ವೊಂದರ ಕಿಟಕಿಯಲ್ಲಿ ಸಿಲುಕಿದ್ದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ವಿಶೇಷಚೇತನ ಬಾಲಕ ಆರುಷ್ (8) ಅಪಾರ್ಟ್ಮೆಂಟ್ನ 11ನೇ ಪ್ಲೋರ್ನ ಬಾಲ್ಕನಿ ಮೂಲಕ ಹೊರ ಹೋಗಿ 10ನೇ ಮಹಡಿಯ ಕಿಟಕಿಯಲ್ಲಿ ಸಿಲುಕಿದ್ದನು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬಾಲಕನನ್ನು ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದಾರೆ.