ದಲಿತ ನಾಯಕರನ್ನು ಹತ್ತಿಕ್ಕುವ ಸಂಚು: ಶಾಸಕ ಚಂದ್ರು ಲಮಾಣಿ ಪರ ದಲಿತ ಮುಖಂಡರ ಆಕ್ರೋಶ

ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ವಶಕ್ಕೆ ಪಡೆದಿದ್ದನ್ನು ದಲಿತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಸಂಚು ಎಂದು ಆರೋಪಿಸಿದ್ದು, ಶಾಸಕ ಲಮಾಣಿ ಮತ್ತು ಪಿ. ರಾಜೀವ್ ಅವರು ಲಂಬಾಣಿ ಹಾಗೂ ದಲಿತ ಸಮುದಾಯದ ಪ್ರಬಲ ಧ್ವನಿಗಳಾಗಿದ್ದಾರೆ. ಇಂತಹ ನಾಯಕರನ್ನು ಹತ್ತಿಕ್ಕುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಸಮುದಾಯಗಳು ಈ ಒತ್ತಡ ತಂತ್ರಗಳನ್ನು ಸಹಿಸುವುದಿಲ್ಲ, ಕಾನೂನು ಹೋರಾಟ ನಡೆಸುತ್ತವೆ ಎಂದು ಎಚ್ಚರಿಸಿದ್ದಾರೆ.