ಡಿಕೆ ಶಿವಕುಮಾರ್ ಹೇಳಿಕೆ

ತನ್ನ ವಿಡಿಯೋದಲ್ಲಿ ಪಜ್ವಲ್, ನನ್ನ ವಿರುದ್ಧ ಪಿತೂರಿ ನಡೆದಿದೆ, ಷಡ್ಯಂತ್ರವೊಂದಕ್ಕೆ ತಾನು ಬಲಿಯಾಗಿದ್ದೇನೆ ಅಂತ ಹೇಳಿರುವುದಕ್ಕೆ ಪ್ರತಿಕ್ರಯಿಸಿದ ಶಿವಕುಮಾರ್, ಯಾರು ಏನು ಬೇಕಾದರೂ ಹೇಳಿಕೊಳ್ಳಲಿ, ಮಾತಾಡುವವರ ಬಾಯಿಗೆ ಬೀಗ ಹಾಕಲಾಗುತ್ತಾ ಅಂತ ಹೇಳಿದರು. ರಾಹುಲ್ ಗಾಂಧಿಯ ಹೆಸರು ಸಹ ಪ್ರಜ್ವಲ್ ಪ್ರಸ್ತಾಪ ಮಾಡಿದ್ದಾರೆ ಎಂದಾಗ ಶಿವಕುಮಾರ್ ಎಲ್ಲಾದಕ್ಕೂ ಕಾಲವೇ ಉತ್ತರ ನೀಡಲಿದೆ ಎಂದರು.