ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ಮತ್ತು ಸಮರ್ಥ ನಾಯಕತ್ವ ಕೊರತೆ ಇದೆ ಮತ್ತು ಹೇಳಿಕೊಳ್ಳಲು ಯೋಗ್ಯ ಸಾಧನೆಗಳಿಲ್ಲ; ಹಾಗಾಗಿ, ಕೇಂದ್ರದಿಂದ ಅನುದಾನ ಸಿಕ್ಕಿಲ್ಲ ಎನ್ನುತ್ತಾ ವಿವಾದ ಸೃಷ್ಟಿಸಿ ಜನರ ಬೆಂಬಲ ಗಿಟ್ಟಿಸುವ ವ್ಯರ್ಥ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.