ಚನ್ನಪಟ್ಟಣ ಬದಲಾವಣೆಗೆ ಪಣತೊಟ್ಟಿದ್ದೇವೆ: ಡಿಕೆ ಶಿವಕುಮಾರ್

ನಮ್ಮ ಇಡೀ ಸರ್ಕಾರ ಚನ್ನಪಟ್ಟಣದಲ್ಲಿ ಬದಲಾವಣೆ ತರಲು ಸಿದ್ಧವಾಗಿದೆ. ಕೇವಲ ರಾಜಕೀಯಕ್ಕಾಗಿ ಅಲ್ಲ, ಇಲ್ಲಿ ಬದಲಾವಣೆ ಮಾಡಬೇಕು ಎಂಬುದು ನಮ್ಮ ನಿರೀಕ್ಷೆಯಾಗಿತ್ತು. ಅದನ್ನು ಮಾಡಲು ಹೊರಟಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹಿಂದೆ ಮಾಡಲು ಆಗಿರಲಿಲ್ಲ, ಈಗ ನಮಗೆ ಅವಕಾಶ ಸಿಕ್ಕಿದೆ. ಈಗ ಜನಸೇವೆ ಮಾಡಲು ಹೊರಟಿದ್ದೇವೆ ಎಂದರು.