ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದು, ಸಂಪುಟದಲ್ಲಿ ಸ್ಥಾನ ಪಡೆಯಲು ವಿವಿಧ ರೀತಿಯಲ್ಲಿ ಶಾಸಕರು ಯತ್ನಿಸುತ್ತಿದ್ದಾರೆ. ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ಗೆ ಸಚಿವ ಸ್ಥಾನ ಕೊಡುವಂತೆ ಗುಬ್ಬಿ ವಾಸಣ್ಣ ಅಭಿಮಾನಿ ಬಳಗದವರು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಮೊರೆ ಹೋಗಿದ್ದಾರೆ. ಜತೆಗೆ ದೇವರಿಗೆ ಉರುಳು ಸೇವೆ ಮಾಡಿ, ಮುಡಿ ಕೊಟ್ಟು ಬಂದಿದ್ದಾರೆ.