ಅಕ್ರಮ ಆದಾಯ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರು ಮಾಡಿದ ಟೀಕೆಗಳನ್ನು ವಿನಮ್ರತೆಯಿಂದ ಕೇಳಿಸಿಕೊಂಡಿರುವುದಾಗಿ ಹೇಳಿದ ಶಿವಕುಮಾರ್ ಎಲ್ಲರಿಗೂ ತಕ್ಕ ಸಮಯದಲ್ಲಿ ಉತ್ತರ ನೀಡುವುದಾಗಿ ಹೇಳಿದರು. ತಾನ್ಯಾವುದೇ ತಪ್ಪು ಮಾಡಿಲ್ಲ, ತನ್ನ ಪಾಡಿಗೆ ತಾನು ಪಕ್ಷದ ಕೆಲಸವನ್ನು ಮಾಡಿಕೊಂಡು ಹೋಗುವಾಗ ತೊಂದರೆ ಮಾಡುವ ಪ್ರಯತ್ನಗಳು ನಡೆದಿವೆ ಎಂದು ಅವರು ಹೇಳಿದರು.