ಚನ್ನರಾಯಪಟ್ಟಣದಲ್ಲಿ ಕುಮಾರಸ್ವಾಮಿ

ನಂತರ ತಮ್ಮ ಮುಂದಿರುವ ಸವಾಲುಗಳ ಬಗ್ಗೆ ಮಾತಾಡಿದ ಅವರು ಮಂಡ್ಯದಲ್ಲಿ ಪ್ರಚಾರ ಮಾಡಲು ತನಗೆ ಸಮಯ ಸಿಗುತ್ತಿಲ್ಲ ಎಂದರು. ಅಲ್ಲಿನ ಎಂಟು ವಿಧಾನಸಭಾ ಕ್ಷೇತ್ರಗಳ 8 ಸಭೆಗಳಲ್ಲಿ ಭಾಗವಹಿಸಲು ಮಾತ್ರ ಸಾಧ್ಯವಾಗುತ್ತಿದೆ ಎಂದ ಅವರು ಕೆಅರ್ ಪೇಟೆಯಲ್ಲಿ ಇಂದು ಮಧ್ಯಾಹ್ನ ಒಂದು ಸಭೆಯಲ್ಲಿ ಪಾಲ್ಗೊಂಡ ಕಾರಣ ಚನ್ನರಾಯಪಟ್ಟಣಕ್ಕೆ ಬರೋದು ತಡವಾಯಿತು, ಅದಕ್ಕಾಗಿ ಕ್ಷಮೆ ಯಾಚಿಸುವೆ ಎಂದರು.