ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ಯೋಗ ಕೇಂದ್ರದಲ್ಲಿ ಮಹಾ ಶಿವರಾತ್ರಿ ಆಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ. ಮಹಾಶಿವರಾತ್ರಿಯ ಸಂದರ್ಭದಲ್ಲಿ ನನ್ನ ಶುಭಾಶಯಗಳನ್ನು ಕೋರುತ್ತೇನೆ. ಸದ್ಗುರುಗಳ ಆಹ್ವಾನದ ಮೇರೆಗೆ ಇಲ್ಲಿಗೆ ಬರಲು ಅವಕಾಶ ಸಿಕ್ಕಿದ್ದಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಮಹಾಶಿವರಾತ್ರಿ ಆಚರಣೆ ಅದ್ಭುತ ಮತ್ತು ವರ್ಣನಾತೀತ ಎಂದು ಅಮಿತ್ ಶಾ ಹೇಳಿದ್ದಾರೆ.