ವಿರೋಧ ಪಕ್ಷದ ನಾಯಕರು ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡುತ್ತಿರುವ ಬಗ್ಗೆ ಮಾತಾಡಿದ ಅವರು, ಅವರ ರಾಜಕಾರಣವೇ ಶಿವಕುಮಾರ್ ಸುತ್ತ ತಿರುಗುತ್ತಿರುತ್ತದೆ, ಶಿವಕುಮಾರ್ ಹೆಸರು ಹೇಳದೆ ಅವರ ಬೇಳೆ ಬೇಯಲ್ಲ, ಜನಕ್ಕೆ ಎಲ್ಲ ಗೊತ್ತಾಗುತ್ತಿದೆ, ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.