ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ

ರಾಜಕೀಯವಾಗಿ ಶಿವಕುಮಾರ್ ಕೊಂಚ ಒತ್ತಡದಲ್ಲಿರುವುದಂತೂ ಸತ್ಯ. ಕರ್ನಾಟಕಕ್ಕೆ ಬಂದು ಶಾಸಕರನ್ನು ಭೇಟಿಯಾದ ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಅಧಿಕಾರ ಹಂಚಿಕೆ ವಿಷಯದಲ್ಲಿ ಏನು ಹೇಳಿದ್ದಾರೋ ಗೊತ್ತಿಲ್ಲ; ಆದರೆ, ಸಿದ್ದರಾಮಯ್ಯ ಮಾತ್ರ 5-ವರ್ಷದ ಅವಧಿಗೆ ನಾನೇ ಮುಖ್ಯಮಂತ್ರಿ ಅಂತ ಪುನಃ ಹೇಳುತ್ತಿದ್ದಾರೆ. ಅವರು ನಮ್ಮ ನಾಯಕರು, ಹೇಳಿದ್ದನ್ನು ಬೆಂಬಲಿಸಬೇಕಾಗುತ್ತದೆ ಎಂದು ಶಿವಕುಮಾರ್ ವಿಷಾದದಿಂದ ಹೇಳುತ್ತಿದ್ದಾರೆ.