ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆಂಬ ವದಂತಿಗೆ ಪ್ರತಿಕ್ರಿಯೆ ನೀಡಿದ ಸಚಿವ ಚಲುವರಾಯಸ್ವಾಮಿ, ಅವರು ಎಲ್ಲಿಂದಾದರೂ ಸ್ಪರ್ಧಿಸಲಿ ಅದು ತಮ್ಮ ಪಕ್ಷಕ್ಕೆ ಸಂಬಂಧಪಟ್ಟ ವಿಚಾರವಲ್ಲ, ಮತ್ತು ಅವರು ಎಲ್ಲಿಂದ ಸ್ಪರ್ಧಿಸಬೇಕೆಂದು ಹೇಳುವ ಅವಶ್ಯಕತೆ ತನಗಿಲ್ಲ ಎಂದರು.