ಡಾ ಕೆ ಸುಧಾಕರ್, ಬಿಜೆಪಿ ಅಭ್ಯರ್ಥಿ

ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಸ್ಥಳೀಯ ವ್ಯಕ್ತಿ ಹೆಚ್ಚು ಅರ್ಹನೋ ಅಥವಾ ಹೊರಗಿನವರೋ ಅಂತ ಪ್ರಜ್ಞಾವಂತ ಮತದಾರ ಯೋಚನೆ ಮಾಡುತ್ತಾನೆ ಎಂದು ಸುಧಾಕರ್ ಹೇಳಿದರು. ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಅವರ ರಾಜಕೀಯ ನಿವೃತ್ತಿ ಬಗ್ಗೆ ಮಾತಾಡಿದ ಸುಧಾಕರ್, ಕಳೆದ ಎರಡು ತಿಂಗಳುಗಳಿಂದ ಅವರು ಚಿಕ್ಕಬಳ್ಳಾಪುರದ ಅಭ್ಯರ್ಥಿ ಅಂತ ಹೇಳಿಕೊಂಡು ತಿರುಗುತ್ತಿದ್ದರು, ಪಕ್ಷ ಆವರಿಗೆ ಯಾಕೆ ಟಿಕೆಟ್ ಕೊಡಲಿಲ್ಲವೋ ಗೊತ್ತಿಲ್ಲ ಎಂದು ಹೇಳಿದರು.