ನೆರೆದ ಜನರನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ, ಸಂಗೊಳ್ಳಿ ರಾಯಣ್ಣನ ಹಾಗೆ ಪ್ರಾಣವನ್ನು ಬಲಿದಾನ ಮಾಡಲು ಸಿದ್ಧ ಎಂಬ ಮನಸ್ಥಿತಿ ಯುವಕರಲ್ಲಿ ಬೆಳೆಯಬೇಕು ಎಂದು ಹೇಳಿದರು. ಸಂಗೊಳ್ಳಿ ರಾಯಣ್ಣನಂಥವರು ಪ್ರತಿ ಮನೆಯಲ್ಲಿ ಹುಟ್ಟಬೇಕು, ಕುವೆಂಪು ಅವರು ಹೇಳಿದ ಹಾಗೆ ನಮ್ಮ ದೇಶ ಸರ್ವ ಜನಾಂಗಗಳ ಶಾಂತಿಯ ತೋಟವಾಗುವ ನಿಟ್ಟನೆಡೆ ಎಲ್ಲರೂ ಶ್ರಮಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.