ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ ಕುಮಾರಸ್ವಾಮಿ ಕೊಡುಗೆ ಏನು ಎಂದು ಪ್ರಶ್ನಿಸಿದ ಶಿವಕುಮಾರ್ 2018ರಲ್ಲಿ ಕಾಂಗ್ರೆಸ್ ಪಕ್ಷ ಅವರನ್ನು ಮುಖ್ಯಮಂತ್ರಿ ಮಾಡಿದ್ದಾಗ ಎರಡು ಜಿಲ್ಲೆಗಳಿಂದ ಮೂರು ಎಂಎಲ್ ಸಿ, ಮೂರು ಶಾಸಕರ ಜೊತೆಗೆ ಡಿಸಿ ತಮ್ಮಣ್ಣ, ಪುಟ್ಟರಾಜು ಮತ್ತು ಸಾರಾ ಮಹೇಶ್-ಮಂತ್ರಿಗಳಿದ್ದರು. ಆದರೆ, ಅಷ್ಟಾಗಿಯೂ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಿಗೆ ಕುಮಾರಸ್ವಾಮಿ ಏನನ್ನೂ ನೀಡಲಿಲ್ಲ.