ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸುತ್ತಾ ಪ್ರಧಾನಿ ನರೇಂದ್ರ ಮೋದಿ "ತಮ್ಮ ಮನರಂಜನೆಗಾಗಿ ಬಡವರ ಗುಡಿಸಲುಗಳಲ್ಲಿ ಫೋಟೋಶೂಟ್ ಮಾಡಿಸುವ ನಾಯಕರಿಗೆ ಸಂಸತ್ತಿನಲ್ಲಿ ಬಡವರ ಕುರಿತ ಚರ್ಚೆ ಬೇಸರ ತರಿಸುವುದರಲ್ಲಿ ಆಶ್ಚರ್ಯವೇನಿಲ್ಲ" ಎಂದು ಹೇಳಿದರು. ರಾಹುಲ್ ಗಾಂಧಿಯಂತಹ ನಾಯಕರು ನಿರಂತರವಾಗಿ ಸೋಲನ್ನು ಎದುರಿಸಿದ ನಂತರ ತಮ್ಮ ಮಾನಸಿಕ ಸಮತೋಲನವನ್ನು ಕಳೆದುಕೊಳ್ಳುತ್ತಾರೆ ಎಂದು ಮೋದಿ ಹೇಳಿದರು.