ಬಾಗಲಕೋಟೆ ಬಂದ್

ಬಂದ್ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾಡಳಿತ ತಕ್ಕ ಮುನ್ನೆಚ್ಚರಿಕೆಕ ಕ್ರಮಗಳನ್ನು ಜಾರಿಗೊಳಿಸಿದೆ. ನಗರದ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ರಜೆ ಘೋಷಿಸಲಾಗಿದೆ. ನಗರದ ಯಾವುದೇ ಭಾಗದಲ್ಲಿ ಅಹಿತಕರ ಘಟನೆ ಜರುಗದಂತೆ ಪೊಲೀಸರನ್ನು ನಿಯೋಜಿಸಲಾಗಿದೆ. ಅಮಿತ್ ಶಾ ಅವರ ಹೇಳಿಕೆಯ ನಂತರ ರಾಜ್ಯದ ಎಲ್ಲ ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ ಬಂದ್​ಗಳು ಜರುಗುತ್ತಲೇ ಇವೆ.