ಕುಮಾರ್ ಬಂಗಾರಪ್ಪ ಸೊರಬ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿ ಮಂತ್ರಿಯಾಗಿ ಕೆಲಸ ಮಾಡಿದರೂ ಸೊರಬವನ್ನು ಅಭಿವೃದ್ಧಿ ಮಾಡಿಲ್ಲ, ಜನಪ್ರತಿನಿಧಿಯಾಗಿ ಜನಸೇವೆ ಮಾಡೋದು ಬಿಟ್ಟು ಅವರು ತಮ್ಮದೇ ಸಾಮ್ರಾಜ್ಯ ಕಟ್ಟಿಕೊಂಡು ಓಡಾಡಿದರು, ಸೊರಬದಲ್ಲಿ ಬಿಜೆಪಿ ಸೊರಗುವಂತೆ ಮಾಡಿದ ಕುಖ್ಯಾತಿಯೂ ಅವರಿಗೆ ಸಲ್ಲುತ್ತದೆ ಎಂದು ರೇಣುಕಾಚಾರ್ಯ ಹೇಳಿದರು.