ಮಹಿಳೆಯರು ದೂರು ನೀಡಲು ಬಂದಾಗ ಪೊಲೀಸರು ಅದನ್ನು ಸ್ವೀಕರಿಸಿಲ್ಲ ಅಂತ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ಆರೋಪವನ್ನು ಪರಿಶೀಲಿಸಲಾಗುವುದು ಮತ್ತು ಹಾಗೆ ನಡೆದಿದ್ದರೆ ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ ಪೊಲೀಸರ ಮೇಲೆ ಕ್ರಮ ಜರುಗಿಸಲಾಗುವುದು ಎಂದರು. ಹಲ್ಲೆಗೊಳಗಾಗಿರುವ ಯುವಕ ಅಭಿಲಾಷ್ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.