ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಮೃದುಲಾ ಹಾಗೂ ವಿನಯ್ ದಂಪತಿ ಪುತ್ರ ಪ್ರಣವ್ 498 ರೂಬಿಕ್ಸ್ ಕ್ಯೂಬ್ ಬಳಸಿ ಶ್ರೀರಾಮನ ಚಿತ್ರ ಬಿಡಿಸಿದ್ದಾನೆ. ಪ್ರಣವ್ 7ನೇ ತರಗತಿಯಲ್ಲಿ ಓದುತ್ತಿದ್ದಾನೆ. ಪ್ರಣವ್ ಅವರ ಈ ಕಾರ್ಯಕ್ಕೆ ಎಲ್ಲರಿಂದ ಶ್ಲಾಘನೆ ವ್ಯಕ್ತವಾಗಿದೆ.