ಟಯರ್​ಗೆ ಬೆಂಕಿ ಹಚ್ಚುವ ವೇಳೆ ಕಾಲಿಗೆ ಹೊತ್ತಿದ ಬೆಂಕಿ

2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಮುಖಂಡರ ಹೋರಾಟ ತೀವ್ರಗೊಂಡಿದೆ. ಬೆಳಗಾವಿ ಲಾಠಿಚಾರ್ಜ್ ಖಂಡಿಸಿ ಗದಗದಲ್ಲಿ ನಡೆದ ಪ್ರತಿಭಟನೆ ವೇಳೆ ಹೈಡ್ರಾಮಾ ನಡೆದಿದೆ. ಟಯರ್​​ಗೆ ಬೆಂಕಿ ಹಚ್ಚುವ ವೇಳೆ ಪ್ರತಿಭಟನಾಕಾರರೊಬ್ಬರ ಕಾಲಿಗೆ ಬೆಂಕಿ ಹೊತ್ತಿಕೊಂಡ ಘಟನೆಯೂ ನಡೆಯಿತು. ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ನೂಕುನುಗ್ಗಲು, ತಳ್ಳಾಟ ನಡೆಯಿತು.