‘ನನಗೆ ನ್ಯಾಯ ಸಿಗುವವರೆಗೂ ಧರಣಿ ನಡೆಯುತ್ತೆ’; ಎಚ್ಚರಿಕೆ ನೀಡಿದ ನಿರ್ಮಾಪಕ ಕುಮಾರ್

ನಿರ್ಮಾಪಕ ಕುಮಾರ್ ಅವರು ಕಿಚ್ಚ ಸುದೀಪ್ ವಿರುದ್ಧ ಸಿಡಿದೆದ್ದಿದ್ದಾರೆ. ಸುದೀಪ್ ಕೋರ್ಟ್ ಮೆಟ್ಟಿಲು ಹತ್ತಿದ್ದನ್ನು ಖಂಡಿಸಿದ್ದಾರೆ. ಫಿಲ್ಮ್ ಚೇಂಬರ್ನಲ್ಲೇ ಎಲ್ಲವೂ ಇತ್ಯರ್ಥ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಫಿಲ್ಮ್ ಚೆಂಬರ್ ಎದುರು ಅವರು ಪ್ರತಿಭಟನೆ ಆರಂಭಿಸಿದ್ದಾರೆ. ಈ ಪ್ರತಿಭಟನೆ ಎಷ್ಟು ದಿನ ನಡೆಯಲಿದೆ ಎಂಬುದನ್ನು ಅವರು ಹೇಳಿದ್ದಾರೆ. ‘ನನಗೆ ನ್ಯಾಯ ಸಿಗುವವರೆಗೂ ನಾನು ಪ್ರತಿಭಟನೆ ಮುಂದುವರಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.