ಸಿಎಂ ಇಬ್ರಾಹಿಂ, ಜೆಡಿಎಸ್ ರಾಜ್ಯಾಧ್ಯಕ್ಷ

ಕೋರ್ ಕಮಿಟಿ ರಾಜ್ಯದಾದ್ಯಂತ ಪ್ರವಾಸ ಮಾಡಿ ಅಭಿಪ್ರಾಯ ಸಂಗ್ರಹಣೆ ಮಾಡಿದ ಬಳಿಕ ಮೈತ್ರಿಯ ಬಗ್ಗೆ ಚರ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು, ಆದರೆ ಕಮಿಟಿ ಪ್ರವಾಸ ಆರಂಭಿಸುವ ಮೊದಲೇ ಕುಮಾರಸ್ವಾಮಿ ಬಿಜೆಪಿ ನಾಯಕರ ಜೊತೆ ಮಾತುಕತೆಗಿಳಿದರು ಎಂದು ಇಬ್ರಾಹಿಂ ಹೇಳಿದರು. ಅಕ್ಟೋಬರ್ 16ರಂದು ಬೆಂಬಲಿಗರೊಂದಿಗೆ ಚರ್ಚೆ ನಡೆಸಿದ ಬಳಿಕ ಮುಂದಿನ ಹೆಜ್ಜೆಯ ಬಗ್ಗೆ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.