ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಸರ್ಮ ಅವರು; ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಜಾರಿಯಲ್ಲಿರುವ ಶೀತಲ ಸಮರದಿಂದ ಕರ್ನಾಟಕ ಸರ್ಕಾರ ಪತನಗೊಳ್ಳಲಿದೆ ಅಂತ ಹೇಳಿರುವುದನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದಾಗ, ಎಲ್ಲೋ ಕೂತು ಮಾತಾಡುವ ಸರ್ಮಗೆ ಕರ್ನಾಟಕದ ಬಗ್ಗೆ ಏನು ಗೊತ್ತು? ಅವರೇನು ಪ್ರಧಾನ ಮಂತ್ರಿಯೇ ಅಥವಾ ಬಿಜೆಪಿ ರಾಷ್ಟ್ರಾಧ್ಯಕ್ಷರೇ? ಎಂದು ಪ್ರಶ್ನಿಸಿದರು.