ಸಕಲೇಶಪುರ ಸಹಾಯಕ ಆಯುಕ್ತರಿ​​ಗೆ ಹೊಡೆದ ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ

ಹಾಸನಾಂಬೆ ದೇಗುಲದ ವಿವಿಐಪಿ ಗೇಟ್ ತಳ್ಳಿ ಜನರು ನುಗ್ಗಿದ್ದ ಹಿನ್ನೆಲೆ ಆಕ್ರೋಶಗೊಂಡ ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅವರು ಸಕಲೇಶಪುರದ ಸಹಾಯಕ ಆಯುಕ್ತರಾಗಿರುವ ಶಿಲ್ಪಾ ಅವರಿ​ಗೆ ಹೊಡೆದಿದ್ದಾರೆ. ಶಾಸಕ ಸಿಮೆಂಟ್ ಮಂಜು ಅವರು ದೇಗುಲದ ಒಳಗೆ ಪ್ರವೇಶಿಸುತ್ತಿದ್ದಂತೆ ಶಾಸಕರ ಜೊತೆ ಗೇಟ್ ತಳ್ಳಿ ಜನರು ಒಳಗೆ ನುಗ್ಗಿದ್ದಾರೆ. ಈ ವೇಳೆ ಗರಂ ಆದ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರ ಕೈಗೆ ಹೊಡೆದು ಸುಮ್ಮನಿರುವಂತೆ ಗದರಿಸಿ ಹೇಳಿದರು.