ಜನರ ಅಳಲು ಕೇಳಿದ ಬೀಳಗಿ ಶಾಸಕ ಜೆಟಿ ಪಾಟೀಲ್ ಸಾರ್ವಜನಿಕರ ಎದುರೇ ಫಕೀರ್ ಬೂದಿಹಾಳ ಗ್ರಾಮದಲ್ಲಿ ಪಿಡಿಒ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನರ ಪರ ಕೆಲಸ ಮಾಡದಿದ್ದರೆ ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ನಾಳೆಯೇ ಪಿಡಿಒಗಳ ಸಭೆ ಕರೆಯುವಂತೆಯೂ ಸೂಚಿಸಿದರು.