ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸಚಿವರುಗಳು ಒಟ್ಟಾಗಿ ಸೇರಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ರಿಂದ ಸಂಸದ ಡಿ.ಕೆ.ಸುರೇಶ್ ನಿವಾಸದಲ್ಲಿ ಔತಣಕೂಟ ಆಯೋಜನೆ ಮಾಡಲಾಗಿದೆ. ಆ ಮೂಲಕ ಲೋಕಸಭೆ ಚುನಾವಣೆ ಬಳಿಕ ಇದೇ ಮೊದಲ ಔತಣಕೂಟವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬಹುದಾದ ಅಂಕಿ ಅಂಶಗಳ ಕುರಿತು ಚರ್ಚೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಮುಂಬರುವ ಸ್ಥಳೀಯ ಚುನಾವಣೆ, ಬಿಬಿಎಂಪಿ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದೆ.