ಕುಮಾರಸ್ವಾಮಿ ಒಬ್ಬ ಹಿರಿಯ ರಾಜಕಾರಣಿ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿ ಮಹಿಳೆಯರು ಬಗ್ಗೆ ಬಹಳ ಕೀಳುಸ್ತರದಲ್ಲಿ ಮಾತಾಡಿದ್ದಾರೆ, ತಮ್ಮ ರಾಜಕೀಯ ಲಾಭಕ್ಕೆ ಅವರ ಮಹಿಳೆಯರ ಬಗ್ಗೆ ಕೆಟ್ಟದ್ದಾಗಿ ಮಾತಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ನೀಡಲ್ಲ, ಅವರಿಗೆ ನೋಟೀಸ್ ಜಾರಿಗೊಳಿಸಲಾಗಿದೆ ಮತ್ತು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಪ್ರಕರಣ ದಾಖಲಿಸಿಕೊಂಡು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.