ಪಂಚಾಯತ್ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದ ಸಂಸದರು ಮತ್ತು ಇತರ ನಾಯಕರೊಂದಿಗೆ ಸಭೆ ನಡೆಸಲು ಬೆಂಗಳೂರಿಗೆ ಬಂದಿರುವುದಾಗಿ ಹೇಳಿದ ಅಗರವಾಲ್, ಯತ್ನಾಳ್ ಪಕ್ಷದ ಒಬ್ಬ ಶಿಸ್ತಿನ ಕಾರ್ಯಕರ್ತ, ರಾಜ್ಯದಲ್ಲಿ ಒಟ್ಟು 71 ಲಕ್ಷ ಕಾರ್ಯಕರ್ತರಿದ್ದಾರೆ, ಎಲ್ಲರೂ ಒಂದೇ ತೆರನಾಗಿರುವುದಿಲ್ಲ, ಅಭಿಪ್ರಾಯ ಮತ್ತು ಅನಿಸಿಕೆಗಳು ಬೆರೆ ಬೇರೆಯಾಗಿರುತ್ತವೆ ಎಂದರು.