ಮಂಡ್ಯದ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದಿದ್ದ ಕೋಮುಗಲಭೆ ಪೂರ್ವನಿಯೋಜಿತ ಕೃತ್ಯ ಎಂದು ಪ್ರತಿಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ, ಈ ಆರೋಪಗಳಿಗೆ ಪುಷ್ಟಿ ಕೊಡುವಂಥ ಕೆಲವು ವಿಡಿಯೋಗಳು ಬಯಲಾಗಿವೆ. ಪಾತ್ರೆ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಸಿಸಿಟಿವಿಗೆ ಕಲ್ಲೆಸೆದು ಸಾಕ್ಷ್ಯನಾಶಕ್ಕೆ ಯತ್ನಿಸಿದ ವಿಡಿಯೋ ಇದೀಗ ಬಯಲಾಗಿವೆ.