ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದ ಕೇಂದ್ರ ತಂಡ ಮತ್ತು ರೈತ ಪ್ರತಿನಿಧಿಗಳ ಜೊತೆ ಶುಕ್ರವಾರ ಸಭೆ ನಡೆಸಿತು. ಎರಡೂ ಕಡೆಯವರು ಇದು ಸೌಹಾರ್ದಯುತ ಸಭೆಯಾಗಿದ್ದು, ಮುಂದಿನ ಸುತ್ತಿನ ಮಾತುಕತೆ ಫೆಬ್ರವರಿ 22ರಂದು ನಡೆಯಲಿದೆ ಎಂದು ಹೇಳಿದ್ದಾರೆ. ನರೇಂದ್ರ ಮೋದಿ ಸರ್ಕಾರ ರೈತ ಸಮುದಾಯದ ಕಲ್ಯಾಣಕ್ಕಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಲ್ಹಾದ್ ಜೋಶಿ ಮಾತನಾಡಿದಾಗ, ರೈತ ಮುಖಂಡರು ತಮ್ಮ ಅಭಿಪ್ರಾಯಗಳನ್ನು ಬಲವಾಗಿ ಮಂಡಿಸಿದರು. ಫೆಬ್ರವರಿ 22 ರಂದು ರೈತ ಪ್ರತಿನಿಧಿಗಳೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕೇಂದ್ರ ತಂಡದ ನೇತೃತ್ವ ವಹಿಸಲಿದ್ದಾರೆ ಎಂದು ಜೋಶಿ ಹೇಳಿದರು. ಆ ಸಭೆಯಲ್ಲಿ ತಾವೂ ಭಾಗವಹಿಸುವುದಾಗಿ ಜೋಶಿ ಹೇಳಿದರು.