ಮುಸ್ಲಿಂ ಸಮುದಾಯ ಕಲ್ಯಾಣಕ್ಕೆ ರೂ. 10,000 ಕೋಟಿ ಕೊಡೋದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ ಅದರೆ ಅಷ್ಟು ದೊಡ್ಡ ಮೊತ್ತವನ್ನು ಹೇಗೆ ಹೊಂದಿಸಲಿದ್ದಾರೆ ಅನ್ನೋದು ಜನಕ್ಕೆ ಅರ್ಥವಾಗುತ್ತಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಿಟ್ಟ ಅನುದಾನ ಅಥವಾ ಶಾಲಾಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನ ನಿಲ್ಲಿಸಿ ಅವರು ಹಣ ನೀಡುತ್ತಾರೆಯೇ ಅಂತ ಸೂಲಿಬೆಲೆ ಪ್ರಶ್ನಿಸಿದರು.