ಕಾಡು ಪ್ರಾಣಿಗಳ ಬೇಟೆಗೆ ಬಳಸುತ್ತಿದ್ದ ಸ್ಫೋಟಕ ಪತ್ತೆ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಂಗಯ್ಯದುರ್ಗ ಅರಣ್ಯ ಪ್ರದೇಶದ ಸುತ್ತಮುತ್ತ 15 ಕಡೆ ಕಾಡುಪ್ರಾಣಿಗಳ ಬೇಟೆಗೆ ಬಳಸುತ್ತಿದ್ದ ಸ್ಫೋಟಕ ಪತ್ತೆಯಾಗಿದೆ. ವಿಚಾರ ತಿಳಿದು ಹುಬ್ಬಳ್ಳಿ ಸೇರಿದಂತೆ ವಿವಿಧ ಕಡೆಯಿಂದ ಅರಣ್ಯ ಇಲಾಖೆಯ ಪರಿಣಿತರ ತಂಡ ಆಗಮಿಸಿ ಸ್ಫೋಟಕ ವಶಪಡಿಸಿಕೊಂಡಿದೆ.