ಮೋಡ ಬಿತ್ತನೆ ಪ್ರಸ್ತಾಪದ ಬಗ್ಗೆ ಮಾತಾಡಿದ ಅವರು, ಹಿಂದಿನ ಪ್ರಯತ್ನಗಳು ವಿಫಲವಾಗಿರುವುದರಿಂದ ಸದ್ಯಕ್ಕೆ ಸರ್ಕಾರಕ್ಕೆ ಆ ಯೋಚನೆ ಇಲ್ಲ ಎಂದು ಹೇಳಿದರು. ರಾಜ್ಯದ ಎಲ್ಲ ತಾಲ್ಲುಕುಗಳಲ್ಲಿನ ಮಳೆ-ಬೆಳೆ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ಬಂದು ಬಳಿಕ ಅವುಗಳನ್ನು ಆಧರಿಸಿ ಬರದ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಸಚಿವ ಹೇಳಿದರು.