ಜೈಲಿಗೆ ಹೋದ ಪವಿತ್ರಾ ಗೌಡ; ಅಮ್ಮನಿಗಾಗಿ ಪೊಲೀಸ್ ವ್ಯಾನ್ ಹೊರಗೆ ಕಾದು ನಿಂತ ಮಗಳು

ನಟಿ ಪವಿತ್ರಾ ಗೌಡ ಜೈಲು ಪಾಲಾಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದು, ಇಂದು (ಜೂನ್​ 20) ಅವರ ಪೊಲೀಸ್​​ ಕಸ್ಟಡಿ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಪವಿತ್ರಾ ಗೌಡ ಸೇರಿ ಹಲವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿದೆ. ಕೋರ್ಟ್​ನಲ್ಲಿ ವಿಚಾರಣೆ ಮುಗಿಸಿ ಪೊಲೀಸ್​ ವ್ಯಾನ್​ ಹತ್ತಿದಾಗ ಅವರನ್ನು ನೋಡಲು ಪುತ್ರಿ ಖುಷಿ ಗೌಡ ಆಗಮಿಸಿದ್ದರು. ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಖುಷಿ ಗೌಡ ಹರಸಾಹಸ ಪಡಬೇಕಾಯಿತು. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್​ ವ್ಯಾನ್​ನ ಪಕ್ಕದಲ್ಲಿ ನಿಂತು ಮಾತನಾಡಿದರು. ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ.