ಬಳ್ಳಾರಿ ಜಿಲ್ಲೆಯ ಸಾಕಮ್ಮ ಎಂಬ ಮಹಿಳೆ 25 ವರ್ಷಗಳ ಬಳಿಕ ಹಿಮಾಚಲ ಪ್ರದೇಶದ ಅನಾಥಾಶ್ರಮದಲ್ಲಿ ಪತ್ತೆಯಾಗಿದ್ದಾರೆ.ಅವರು 25 ವರ್ಷಗಳ ಹಿಂದೆ ಹೊಸಪೇಟೆಯಿಂದ ರೈಲು ಹತ್ತಿ ಹಿಮಾಚಲಕ್ಕೆ ಹೋಗಿದ್ದರು. ಸಮಾಜ ಕಲ್ಯಾಣ ಇಲಾಖೆಯ ಪ್ರಯತ್ನದಿಂದ ಅವರ ಕುಟುಂಬಸ್ಥರು ಪತ್ತೆಯಾಗಿದ್ದು, ವಿಡಿಯೋ ಕಾಲ್ ಮೂಲಕ ಮಕ್ಕಳು ತಮ್ಮ ತಾಯಿಯೊಂದಿಗೆ ಮಾತನಾಡಿದ್ದಾರೆ. ಈ ಘಟನೆ ಸಾಕಷ್ಟು ಭಾವುಕತೆಯನ್ನು ತಂದೊಡ್ಡಿದೆ.