ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಒಂದು ಹೊತ್ತಿನ ಊಟಕ್ಕಾಗಿ ಅಲೆದಾಡುತ್ತಿದ್ದಾರೆ. ಆದರೆ ಟಿವಿ9 ಡಿಜಿಟಲ್ನಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದಾರೆ. ಕಲಬುರಗಿ ಡಿಡಿಪಿಐ ಸಕ್ರಪ್ಪೆಗೌಡ ಬಿರಾದರ್ ಸೂಚನೆ ಮೇರೆಗೆ ಶಾಲೆಯಲ್ಲೇ ಬಿಸಿಯೂಟ ಸಿದ್ದಪಡಿಸಿದ್ದು, ಮಕ್ಕಳು ಊಟ ಮಾಡಿದ್ದಾರೆ.