ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್​; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಕೇಸ್​ನಲ್ಲಿ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಮುಂತಾದವರ ಪೊಲೀಸ್​ ಕಸ್ಟಡಿ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿದ ಎಲ್ಲ ಸ್ಥಳಗಳಿಗೆ ತೆರಳಿ ಪೊಲೀಸರು ಮಹಜರು ಮಾಡುತ್ತಿದ್ದಾರೆ. ದರ್ಶನ್​ ಮತ್ತು ಗ್ಯಾಂಗ್​ ಪಾರ್ಟಿ ಮಾಡಿದ ಪಬ್​ಗೂ ಕರೆದುಕೊಂಡು ಹೋಗಿ ಮಹಜರು ಮಾಡಲಾಗಿದೆ. ಇಂದು (ಜೂನ್​ 17) ಮಹಜರು ಸಲುವಾಗಿ ಪೊಲೀಸ್​ ವ್ಯಾನ್​ ಹತ್ತಿದ ದರ್ಶನ್​ ಮಂಕಾಗಿದ್ದು ಕಂಡುಬಂತು. ಅರೆಸ್ಟ್​ ಆದ ಆರಂಭದಲ್ಲಿ ಗತ್ತು ತೋರಿಸುತ್ತಿದ್ದ ದರ್ಶನ್​ ವರಸೆ ಈಗ ಬದಲಾಗಿದೆ ಎಂಬ ಮಾಹಿತಿ ಇದೆ. 2ನೇ ಬಾರಿಗೆ ಪೊಲೀಸ್​ ಕಸ್ಟಡಿ ಮುಂದುವರಿದ ಬಳಿಕ ತನಿಖೆಯ ರೀತಿ ಬದಲಾಗಿದೆ. ಪೊಲೀಸ್​ ಭಾಷೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಕ್ಕೆ ದರ್ಶನ್​ ಸೈಲೆಂಟ್​ ಆಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಹಲವು ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಆ ಎಲ್ಲ ಸಾಕ್ಷಿಗಳನ್ನು ಮುಂದಿಟ್ಟುಕೊಂಡು ಪ್ರಶ್ನೆ ಕೇಳಿದಾಗ ‘ನನ್ನಿಂದ ತಪ್ಪಾಗಿದೆ. ಬಿಟ್ಟು ಬಿಡಿ’ ಎಂದು ದರ್ಶನ್​ ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.