ತಮ್ಮ ಬಗ್ಗೆ ಜನ ಮತ್ತು ಮಾಧ್ಯಮಗಳು ಚರ್ಚಿಸುತ್ತಿರುವ ಅಂಶಗಳನ್ನು ಪಟ್ಟಿಮಾಡಿಕೊಂಡಿದ್ದ ಗೌಡರು ಒಂದೊಂದಾಗಿ ಎಲ್ಲ ಸಂದೇಹಗಳಿಗೆ ಉತ್ತರ ನೀಡಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಿರುವುದಕ್ಕೆ ತಮಗೆ ಬೇಸರವಾಗಿರುವುದು ನಿಜ ಎಂದ ಸದಾನಂದಗೌಡರು ಕಾಂಗ್ರೆಸ್ ಪಕ್ಷದ ನಾಯಕರಿಂದ ಪಕ್ಷ ಸೇರುವಂತೆ ಆಹ್ವಾನ ಬಂದಿದ್ದು ಸತ್ಯವೆಂದರು.