ಬೆಂಗಳೂರು, ಆಗಸ್ಟ್ 4: ಸಂಸತ್ ಸದಸ್ಯತ್ವ ಕಳೆದುಕೊಂಡ ಪ್ರಕರಣದಲ್ಲಿ ( defamation complaint) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಸುಪ್ರೀಂ ಕೋರ್ಟ್ (Supreme Court) ಬಿಗ್ ರೀಲೀಫ್ ನೀಡಿರುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ (KPCC president DK Shivakumar) ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ನಮಗೆ ನ್ಯಾಯಲಯದ ಬಗ್ಗೆ ನಂಬಿಕೆ ಇದೆ. ಆಗಿರೋ ಅನ್ಯಾಯಕ್ಕೆ ಖಂಡಿತ ನ್ಯಾಯ ಸಿಗಲಿದೆ. ರಾಹುಲ್ ಗಾಂಧಿ ಅವರು 7 ಲಕ್ಷ ಮತಗಳಿಂದ ಗೆದ್ದು ಲೋಕಸಭೆಗೆ ಪ್ರವೇಶಿಸಿದ್ದರು. ಅವರು ಎಂಪಿ ಆಗಿರಬೇಕು, ದೇಶದ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ. ಪುಲಿಕೇಶಿ ನಗರದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಎಸಿ ಶ್ರೀನಿವಾಸ್ ಅವರ ಶಾಸಕರ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.