ಜುಲೈನಿಂದ ಬಿಜೆಪಿಯಲ್ಲಿ ಹೊಸ ಯುಗ ಆರಂಭ, ಕುಟುಂಬ ರಾಜಕಾರಣ ಅಂತ್ಯ: ಹೆಸರೇಳದೆ ವಿಜಯೇಂದ್ರಗೆ ಯತ್ನಾಳ್ ಟಾಂಗ್

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಮಗ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ನೇರ ಮತ್ತು ಪರೋಕ್ಷವಾಗಿ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಇದೀಗ ಮತ್ತೆ ಯತ್ನಾಳ್ ಅವರು ವಿಜಯೇಂದ್ರ ಹೆಸರು ಹೇಳದೆ ಟಾಂಗ್ ಕೊಟ್ಟಿದ್ದಾರೆ. ಜುಲೈನಿಂದ ದೇಶದಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗಲಿದೆ, ಬಿಜೆಪಿಯಲ್ಲಿ ಹೊಸ ಯುಗ ಆರಂಭವಾಗಲಿದೆ ಎಂದಿದ್ದಾರೆ.