ಕರುನಾಡಿಗೆ ಬಂದು ಆದಿಯೋಗಿ ಎದುರು ನಾಗಮಂಡಲ ಕಾರ್ಯಕ್ರಮದಲ್ಲಿ ಭಾಗಿಯಾದ ತಮನ್ನಾ ಭಾಟಿಯಾ

ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರು ‘ಜೈಲರ್’ ಸಿನಿಮಾದ ಗೆಲುವಿನ ಖುಷಿಯಲ್ಲಿದ್ದಾರೆ. ಅವರಿಗೆ ದೇವರ ಬಗ್ಗೆ ಅಪಾರವಾದ ಭಕ್ತಿ ಇದೆ. ಇಂದು (ಆಗಸ್ಟ್​ 21) ನಾಗರ ಪಂಚಮಿ ಹಬ್ಬದ ಪ್ರಯುಕ್ತ ತಮನ್ನಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಬಳಿ ಇರುವ ಇಶಾ ಫೌಂಡೇಷನ್​ನಲ್ಲಿ ಅವರು ಸದ್ಗುರು ಜಗ್ಗಿವಾಸುದೇವ್​ ಜೊತೆ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ನಾಗಮಂಡಲ ಕಾರ್ಯಕ್ರಮದಲ್ಲಿ ತಮನ್ನಾ ಭಾಟಿಯಾ ಜೊತೆ ಸಚಿವರಾದ ಕೆ.ಹೆಚ್. ಮುನಿಯಪ್ಪ, ಡಾ. ಎಂ.ಸಿ. ಸುಧಾಕರ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದಾರೆ.