ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳೆ ನಡೆಯುತ್ತಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದು, ಗಾಯಗೊಂಡವರನ್ನು ಕರೆದೊಯ್ಯುವಾಗ ಆಂಬ್ಯುಲೆನ್ಸ್ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ವರದಿಯಾಗಿದೆ. ತ್ರಿವೇಣಿ ಸಂಗಮಕ್ಕೆ ಹೋಗುವ ಮತ್ತು ಹೊರಡುವ ಮಾರ್ಗಗಳನ್ನು ಪ್ರತ್ಯೇಕಿಸಲಾಗಿಲ್ಲ ಎಂಬುದು ಮುಖ್ಯ ವಿಷಯವಾಗಿದೆ. ಹಾಗಾಗಿ ಮೌನಿ ಅಮಾವಾಸ್ಯೆಯ ಅಮೃತ ಸ್ನಾನಕ್ಕೆಂದು ಹೋಗುವವರು ಪರಸ್ಪರ ತಳ್ಳಲ್ಪಟ್ಟಿದ್ದಾರೆ.